BREAKING NEWS

ರೈತರ ಆತ್ಮಹತ್ಯೆ: ಎಚ್‌ಡಿಕೆ ಆರೋಪ ಸುಳ್ಳು: ಅಂಕಿ ಅಂಶ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಇದು ಅಧಿಕಾರಿಗಳು, ಪೊಲೀಸ್ ವರದಿಗಳಿಂದ ಬಂದಿರುವ ಮಾಹಿತಿ ಎಂದು ರೈತರ ಆತ್ಮಹತ್ಯೆ ಪ್ರಕರಣದ ಅಂಕಿ ಅಂಶ ಬಿಡುಗಡೆ ಮಾಡಿದರು.

ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ: ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ‌ ಇದೆ. ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ. ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣದ ಅಂಕಿ-ಅಂಶ: 2018-19ರಲ್ಲಿ 1085 ರೈತರು, 2019-20ರಲ್ಲಿ 1091 ರೈತರು, 2020-21ರಲ್ಲಿ 855 ರೈತರು, 2021-22ರಲ್ಲಿ 915 ರೈತರ ಆತ್ಮಹತ್ಯೆ ಆಗಿದೆ. 2022-23ರಲ್ಲಿ 755 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1ರಿಂದ ಈವರೆಗೆ 96 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಎಚ್‌ಡಿಕೆ

ರೈತರ ಆತ್ಮಹತ್ಯೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದ್ದು, 5 ಅಷ್ಟೇ ಅಲ್ಲ, ಇನ್ನೂ 5 ಗ್ಯಾರಂಟಿ ಕೊಡಲಿ ನಮ್ಮ ಬೆಂಬಲವಿದೆ. ಆದರೆ ಶಿಸ್ತುಬದ್ಧವಾಗಿ ತೆಗೆದುಕೊಂಡು ಹೋಗುವ ವಾತಾವರಣ ಇಲ್ಲ. ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿಲ್ಲ. ನಾವಿದ್ದೇವೆ ಎನ್ನುವ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ.

ಬರೀ ಗ್ಯಾರಂಟಿಗಳ ಕಥೆ ಹೇಳಿಕೊಂಡು ಕಾಂಗ್ರೆಸ್​​ನವರು ಹೊರಟಿದ್ದಾರೆ. ಇತಿಹಾಸದಲ್ಲೇ ಆಗದ ವರ್ಗಾವಣೆ ಲೂಟಿ ಈ ಎರಡೇ ತಿಂಗಳಲ್ಲಿ ಆಗಿದೆ. ಆ‌ ಕೋಟ್ಯಂತರ ದುಡ್ಡು ವಸೂಲಿ ಜನಸಾಮಾನ್ಯರ ಮೇಲೆ ಬೀಳಲಿದೆ ಎಂದು ಹೇಳಿದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago