BREAKING NEWS

ಟ್ವಿಟರ್ ನಲ್ಲಿ ಶೀಘ್ರ ವಿಡಿಯೊ-ಆಡಿಯೊ ಕರೆ ಸೇವೆ: ಎಲಾನ್ ಮಸ್ಕ್ ಘೋಷಣೆ

ವಾಷಿಂಗ್ಟನ್: ಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ.

ಹೌದು.. ಖ್ಯಾತ ಮೈಕ್ರೋ ಬ್ಲಾಗಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಎಲಾನ್ ಮಸ್ಕ್, ಶೀಘ್ರದಲ್ಲೇ ಟ್ವಿಟರ್ ನಲ್ಲಿ ಆಡಿಯೋ-ವಿಡಿಯೋ ಕರೆ ವೈಶಿಷ್ಟ್ಯ ಬರಲಿದೆ. iOS, Android, Mac ಮತ್ತು PC ನಲ್ಲಿಯೂ ಈ ವೈಶಿಷ್ಠ್ಯ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಯಾವುದೇ ರೀತಿಯ ಫೋನ್ ನಂಬರ್ ಸಂಖ್ಯೆಯ ಅಗತ್ಯವಿಲ್ಲ. ಎಕ್ಸ್ ಅಥವಾ ಟ್ವಿಟರ್ ಪರಿಣಾಮಕಾರಿ ಜಾಗತಿಕ ವಿಳಾಸ ಪುಸ್ತಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಅವರು ಮೈಕ್ರೋಬ್ಲಾಗಿಂಗ್ ಜಾಲತಾಣ ‘ಎಕ್ಸ್‌’ನಲ್ಲಿ (ಟ್ವಿಟರ್) ಅನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಸಾಕಷ್ಟು ಬದಲಾವಣೆಗಳನ್ನು ತಂದಿದ್ದು, ಕೆಲವು ಸಮಯಗಳ ಹಿಂದೆಯಷ್ಟೇ ಎಲಾನ್ ಮಸ್ಕ್ ಅವರು ಟ್ವಿಟರ್ ಹೆಸರನ್ನು ‘ಎಕ್ಸ್’ ಎಂದು ಮರುನಾಮಕರಣ ಮಾಡಿದ್ದರು.

ಈ ಹಿಂದೆ ‘ಎಕ್ಸ್‌’ ಅಥವಾ ಟ್ವಿಟರ್ ನಲ್ಲಿ ಉದ್ಯೋಗಾವಕಾಶದ ವೈಶಿಷ್ಟ್ಯವನ್ನು ಪರಿಚಯಿಸುವುದಾಗಿ ಇತ್ತೀಚೆಗೆ ಮಸ್ಕ್‌ ಘೋಷಿಸಿದ್ದರು. ಈಗ ವೆರಿಫೈಡ್ ಖಾತೆಗಳಿಗೆ ಎಕ್ಸ್‌ನಲ್ಲಿ ಉದ್ಯೋಗಾವಕಾಶದ (Job Listing) ಕುರಿತು ಪೋಸ್ಟ್ ಮಾಡುವ ಸೇವೆಯನ್ನು ಪ್ರಾರಂಭಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್‌ನಲ್ಲಿ ವಿವರಣೆ ನೀಡಿತ್ತು. ಜಾಬ್ ಲಿಸ್ಟಿಂಗ್ ಫೀಚರ್ ಸದ್ಯ ಬೀಟಾ ವರ್ಷನ್‌ನಲ್ಲಿದೆ.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

12 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

12 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

14 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

14 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

15 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 hours ago