BREAKING NEWS

ಟ್ವಿಟರ್ ನಲ್ಲಿ ಶೀಘ್ರ ವಿಡಿಯೊ-ಆಡಿಯೊ ಕರೆ ಸೇವೆ: ಎಲಾನ್ ಮಸ್ಕ್ ಘೋಷಣೆ

ವಾಷಿಂಗ್ಟನ್: ಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ.

ಹೌದು.. ಖ್ಯಾತ ಮೈಕ್ರೋ ಬ್ಲಾಗಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಎಲಾನ್ ಮಸ್ಕ್, ಶೀಘ್ರದಲ್ಲೇ ಟ್ವಿಟರ್ ನಲ್ಲಿ ಆಡಿಯೋ-ವಿಡಿಯೋ ಕರೆ ವೈಶಿಷ್ಟ್ಯ ಬರಲಿದೆ. iOS, Android, Mac ಮತ್ತು PC ನಲ್ಲಿಯೂ ಈ ವೈಶಿಷ್ಠ್ಯ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಯಾವುದೇ ರೀತಿಯ ಫೋನ್ ನಂಬರ್ ಸಂಖ್ಯೆಯ ಅಗತ್ಯವಿಲ್ಲ. ಎಕ್ಸ್ ಅಥವಾ ಟ್ವಿಟರ್ ಪರಿಣಾಮಕಾರಿ ಜಾಗತಿಕ ವಿಳಾಸ ಪುಸ್ತಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಅವರು ಮೈಕ್ರೋಬ್ಲಾಗಿಂಗ್ ಜಾಲತಾಣ ‘ಎಕ್ಸ್‌’ನಲ್ಲಿ (ಟ್ವಿಟರ್) ಅನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಸಾಕಷ್ಟು ಬದಲಾವಣೆಗಳನ್ನು ತಂದಿದ್ದು, ಕೆಲವು ಸಮಯಗಳ ಹಿಂದೆಯಷ್ಟೇ ಎಲಾನ್ ಮಸ್ಕ್ ಅವರು ಟ್ವಿಟರ್ ಹೆಸರನ್ನು ‘ಎಕ್ಸ್’ ಎಂದು ಮರುನಾಮಕರಣ ಮಾಡಿದ್ದರು.

ಈ ಹಿಂದೆ ‘ಎಕ್ಸ್‌’ ಅಥವಾ ಟ್ವಿಟರ್ ನಲ್ಲಿ ಉದ್ಯೋಗಾವಕಾಶದ ವೈಶಿಷ್ಟ್ಯವನ್ನು ಪರಿಚಯಿಸುವುದಾಗಿ ಇತ್ತೀಚೆಗೆ ಮಸ್ಕ್‌ ಘೋಷಿಸಿದ್ದರು. ಈಗ ವೆರಿಫೈಡ್ ಖಾತೆಗಳಿಗೆ ಎಕ್ಸ್‌ನಲ್ಲಿ ಉದ್ಯೋಗಾವಕಾಶದ (Job Listing) ಕುರಿತು ಪೋಸ್ಟ್ ಮಾಡುವ ಸೇವೆಯನ್ನು ಪ್ರಾರಂಭಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್‌ನಲ್ಲಿ ವಿವರಣೆ ನೀಡಿತ್ತು. ಜಾಬ್ ಲಿಸ್ಟಿಂಗ್ ಫೀಚರ್ ಸದ್ಯ ಬೀಟಾ ವರ್ಷನ್‌ನಲ್ಲಿದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

9 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

10 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

15 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

18 hours ago