BREAKING NEWS

ವಿದ್ಯುತ್ ತಂತಿ ತುಳಿದು‌ ಅಪ್ಪ, ಮಗ ಸೇರಿ ಮೂವರ ಸಾವು

ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ

ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.

ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ (30), ಮಹದೇವಸ್ವಾಮಿ( 40) ಮೃತಪಟ್ಟವರು. ರಾಜೇಗೌಡರ ಜಮೀನಿನಲ್ಲಿ ಕ್ರಿಮಿನಾಶಕ ಹೊಡೆಯಲು ಹೋದಾಗ ಈ ಘಟನೆ ನಡೆದಿದೆ. ಬೆಳಗ್ಗೆ 7.30ಕ್ಕೆ ಮೂವರು ಹೊಲಕ್ಕೆ ಔಷಧ ಹೊಡೆಯಲು ಹೋಗಿದ್ದರು. ಕೆಳಭಾಗದಿಂದ ಔಷಧ ಹೊಡೆದುಕೊಂಡು ಗದ್ದೆಯ ಮೇಲ್ಭಾಗಕ್ಕೆ ಹೋದಾಗ ರಾಚಯ್ಯ ಅವರು ಪಾತಿ ಮೇಲೆ ತುಂಡಾಗಿ ಬಿದ್ದ ತಂತಿಯನ್ನು ತುಳಿದಿದ್ದರು. ಅವರು ಕಿರುಚಿಕೊಂಡಾಗ ಸಹಾಯಕ್ಕೆ ಧಾವಿಸಿದ ಮಗ ಹರೀಶ ಅವರೂ ವಿದ್ಯುತ್ ತಗುಲಿ ಮೃತಪಟ್ಟರು. ಇದನ್ನು ಗಮನಿಸದೇ  ಸಹಾಯಕ್ಕೆ ಹೋದ ಮಹದೇವಸ್ವಾಮಿ ಅವರೂ ಸ್ಥಳದಲ್ಲೇ ಮೃತಪಟ್ಟರು. ಹರೀಶ ಅವರು ರಾಚಯ್ಯ (60) ಅವರ ಒಬ್ಬನೇ ಮಗನಾಗಿದ್ದು ಆಧಾರ ಸ್ತಂಭಗಳನ್ನು ಕಳೆದುಕೊಂಡು ಕುಟುಂಬ ಅನಾಥವಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಶಾಸಕ ಅಶ್ವಿನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಚೆಸ್ಕಾಂ ಅಧಿಕಾರಿಗಳು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಉಸ್ತುವಾರಿ ಸಚಿವರ ಜತೆ ಮಾತನಾಡಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.

andolana

Recent Posts

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

29 mins ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

34 mins ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

54 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

1 hour ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

1 hour ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

1 hour ago