ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ
ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.
ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ (30), ಮಹದೇವಸ್ವಾಮಿ( 40) ಮೃತಪಟ್ಟವರು. ರಾಜೇಗೌಡರ ಜಮೀನಿನಲ್ಲಿ ಕ್ರಿಮಿನಾಶಕ ಹೊಡೆಯಲು ಹೋದಾಗ ಈ ಘಟನೆ ನಡೆದಿದೆ. ಬೆಳಗ್ಗೆ 7.30ಕ್ಕೆ ಮೂವರು ಹೊಲಕ್ಕೆ ಔಷಧ ಹೊಡೆಯಲು ಹೋಗಿದ್ದರು. ಕೆಳಭಾಗದಿಂದ ಔಷಧ ಹೊಡೆದುಕೊಂಡು ಗದ್ದೆಯ ಮೇಲ್ಭಾಗಕ್ಕೆ ಹೋದಾಗ ರಾಚಯ್ಯ ಅವರು ಪಾತಿ ಮೇಲೆ ತುಂಡಾಗಿ ಬಿದ್ದ ತಂತಿಯನ್ನು ತುಳಿದಿದ್ದರು. ಅವರು ಕಿರುಚಿಕೊಂಡಾಗ ಸಹಾಯಕ್ಕೆ ಧಾವಿಸಿದ ಮಗ ಹರೀಶ ಅವರೂ ವಿದ್ಯುತ್ ತಗುಲಿ ಮೃತಪಟ್ಟರು. ಇದನ್ನು ಗಮನಿಸದೇ ಸಹಾಯಕ್ಕೆ ಹೋದ ಮಹದೇವಸ್ವಾಮಿ ಅವರೂ ಸ್ಥಳದಲ್ಲೇ ಮೃತಪಟ್ಟರು. ಹರೀಶ ಅವರು ರಾಚಯ್ಯ (60) ಅವರ ಒಬ್ಬನೇ ಮಗನಾಗಿದ್ದು ಆಧಾರ ಸ್ತಂಭಗಳನ್ನು ಕಳೆದುಕೊಂಡು ಕುಟುಂಬ ಅನಾಥವಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಶಾಸಕ ಅಶ್ವಿನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಚೆಸ್ಕಾಂ ಅಧಿಕಾರಿಗಳು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಉಸ್ತುವಾರಿ ಸಚಿವರ ಜತೆ ಮಾತನಾಡಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…