BREAKING NEWS

ವಿದ್ಯುತ್ ತಂತಿ ತುಳಿದು‌ ಅಪ್ಪ, ಮಗ ಸೇರಿ ಮೂವರ ಸಾವು

ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ

ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.

ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ (30), ಮಹದೇವಸ್ವಾಮಿ( 40) ಮೃತಪಟ್ಟವರು. ರಾಜೇಗೌಡರ ಜಮೀನಿನಲ್ಲಿ ಕ್ರಿಮಿನಾಶಕ ಹೊಡೆಯಲು ಹೋದಾಗ ಈ ಘಟನೆ ನಡೆದಿದೆ. ಬೆಳಗ್ಗೆ 7.30ಕ್ಕೆ ಮೂವರು ಹೊಲಕ್ಕೆ ಔಷಧ ಹೊಡೆಯಲು ಹೋಗಿದ್ದರು. ಕೆಳಭಾಗದಿಂದ ಔಷಧ ಹೊಡೆದುಕೊಂಡು ಗದ್ದೆಯ ಮೇಲ್ಭಾಗಕ್ಕೆ ಹೋದಾಗ ರಾಚಯ್ಯ ಅವರು ಪಾತಿ ಮೇಲೆ ತುಂಡಾಗಿ ಬಿದ್ದ ತಂತಿಯನ್ನು ತುಳಿದಿದ್ದರು. ಅವರು ಕಿರುಚಿಕೊಂಡಾಗ ಸಹಾಯಕ್ಕೆ ಧಾವಿಸಿದ ಮಗ ಹರೀಶ ಅವರೂ ವಿದ್ಯುತ್ ತಗುಲಿ ಮೃತಪಟ್ಟರು. ಇದನ್ನು ಗಮನಿಸದೇ  ಸಹಾಯಕ್ಕೆ ಹೋದ ಮಹದೇವಸ್ವಾಮಿ ಅವರೂ ಸ್ಥಳದಲ್ಲೇ ಮೃತಪಟ್ಟರು. ಹರೀಶ ಅವರು ರಾಚಯ್ಯ (60) ಅವರ ಒಬ್ಬನೇ ಮಗನಾಗಿದ್ದು ಆಧಾರ ಸ್ತಂಭಗಳನ್ನು ಕಳೆದುಕೊಂಡು ಕುಟುಂಬ ಅನಾಥವಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಶಾಸಕ ಅಶ್ವಿನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಚೆಸ್ಕಾಂ ಅಧಿಕಾರಿಗಳು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಉಸ್ತುವಾರಿ ಸಚಿವರ ಜತೆ ಮಾತನಾಡಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

2 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

13 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

13 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

13 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

14 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

14 hours ago