BREAKING NEWS

ವಿದ್ಯುತ್ ತಂತಿ ತುಳಿದು‌ ಅಪ್ಪ, ಮಗ ಸೇರಿ ಮೂವರ ಸಾವು

ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ

ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.

ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ (30), ಮಹದೇವಸ್ವಾಮಿ( 40) ಮೃತಪಟ್ಟವರು. ರಾಜೇಗೌಡರ ಜಮೀನಿನಲ್ಲಿ ಕ್ರಿಮಿನಾಶಕ ಹೊಡೆಯಲು ಹೋದಾಗ ಈ ಘಟನೆ ನಡೆದಿದೆ. ಬೆಳಗ್ಗೆ 7.30ಕ್ಕೆ ಮೂವರು ಹೊಲಕ್ಕೆ ಔಷಧ ಹೊಡೆಯಲು ಹೋಗಿದ್ದರು. ಕೆಳಭಾಗದಿಂದ ಔಷಧ ಹೊಡೆದುಕೊಂಡು ಗದ್ದೆಯ ಮೇಲ್ಭಾಗಕ್ಕೆ ಹೋದಾಗ ರಾಚಯ್ಯ ಅವರು ಪಾತಿ ಮೇಲೆ ತುಂಡಾಗಿ ಬಿದ್ದ ತಂತಿಯನ್ನು ತುಳಿದಿದ್ದರು. ಅವರು ಕಿರುಚಿಕೊಂಡಾಗ ಸಹಾಯಕ್ಕೆ ಧಾವಿಸಿದ ಮಗ ಹರೀಶ ಅವರೂ ವಿದ್ಯುತ್ ತಗುಲಿ ಮೃತಪಟ್ಟರು. ಇದನ್ನು ಗಮನಿಸದೇ  ಸಹಾಯಕ್ಕೆ ಹೋದ ಮಹದೇವಸ್ವಾಮಿ ಅವರೂ ಸ್ಥಳದಲ್ಲೇ ಮೃತಪಟ್ಟರು. ಹರೀಶ ಅವರು ರಾಚಯ್ಯ (60) ಅವರ ಒಬ್ಬನೇ ಮಗನಾಗಿದ್ದು ಆಧಾರ ಸ್ತಂಭಗಳನ್ನು ಕಳೆದುಕೊಂಡು ಕುಟುಂಬ ಅನಾಥವಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಶಾಸಕ ಅಶ್ವಿನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಚೆಸ್ಕಾಂ ಅಧಿಕಾರಿಗಳು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಉಸ್ತುವಾರಿ ಸಚಿವರ ಜತೆ ಮಾತನಾಡಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.

andolana

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

1 hour ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

1 hour ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

2 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

13 hours ago