BREAKING NEWS

ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ-ಮಗ ಸಾವು

ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರ್ದೈವಿಗಳು.

ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ವ್ಯಾಪಾರಕ್ಕಾಗಿ ಬುಧವಾರ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ಹೋಗಿದ್ದರು.

ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ತಂದೆ, ಮಗ ಮುಂದಾದಾಗ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಇಬ್ಬರು ಕೆರೆಯಲ್ಲಿ ಮುಳುಗಿರುವುದು ತಿಳಿದುಬಂದಿದೆ.

ಇದೀಗ ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago