BREAKING NEWS

ಗಂಡನ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಫೇಸ್‌ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೈದರಾಬಾದ್ : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ಮಹಿಳೆ, ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲೇ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್‌ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ವಿವಾಹದ ಬಳಿಕ ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದ. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸನಾ ಮನೆಯವರು ಆಕೆಯ ಆತ್ಮಹತ್ಯೆಗೆ ಹೇಮಂತ್ ಕಾರಣ ಎಂದು ಆರೋಪಿಸಿದ್ದಾರೆ. ಪ್ರಸ್ತುತ, ಹೇಮಂತ್ ಅವರು ಅಬಿಡ್ಸ್ ವಾಣಿಜ್ಯ ಕೇಂದ್ರದಲ್ಲಿ ಡಿಸ್ಕ್ ಜಾಕಿಯಾಗಿ (ಡಿಜೆ) ಕೆಲಸ ಮಾಡುತ್ತಿದ್ದಾರೆ ಮತ್ತು ಡಿಜೆ ಆಗಿರುವ ಇನ್ನೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರ ಸಹೋದರ ಹೇಳಿದರು. ಹೇಮಂತ್ ಹಾಗೂ ಆತನ ಪೋಷಕರ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಾಚಾರಂ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago