BREAKING NEWS

‘ಫೆಮಾ’ ಪ್ರಕರಣ: ಅನಿಲ್‌ ಅಂಬಾನಿ ವಿಚಾರಣೆ ನಡೆಸಿದ ಇ.ಡಿ

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು ತಿಳಿಸಿವೆ.

ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ 64 ವರ್ಷದ ಅನಿಲ್‌ ಅಂಬಾನಿ ಬಂದಿದ್ದರು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಹೊಸ ಪ್ರಕರಣದ ಭಾಗವಾಗಿ ಅನಿಲ್‌ ಅಂಬಾನಿ ಹೇಳಿಕೆಯನ್ನು ದಾಖಲಿಸಲಾಗಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ. ಮುಖ್ಯಸ್ಥ, ಏಷ್ಯಾದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ಅವರ ಸಹೋದರನಾಗಿರುವ ಅನಿಲ್ ಅಂಬಾನಿ ಅವರು ಬೆಳಿಗ್ಗೆ 10 ಗಂಟೆಗೆ ಜಾರಿ ನಿರ್ದೇಶನಾಲಯದ ಮುಂಬೈ ಕಚೇರಿಯನ್ನು ತಲುಪಿದ್ದರು. ಅವರನ್ನು ವಿಚಾರಣೆ ನಡೆಸುತ್ತಿದ್ದಾಗ ಅವರ ಕಚೇರಿ ಸಿಬ್ಬಂದಿ ಹೊರಗೆ ಅವರಿಗಾಗಿ ಕಾಯುತ್ತಿದ್ದರು ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿಯೂ ಈ ಹಿಂದೆ 2020ರಲ್ಲಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಕಳೆದ ವರ್ಷದ ಆಗಸ್ಟ್‌ನಲ್ಲಿ ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದಡಿ ಅನಿಲ್‌ ಅಂಬಾನಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಕಪ್ಪುಹಣ ತಡೆ ಕಾಯ್ದೆಯಡಿ ಈ ನೋಟಿಸ್‌ ನೀಡಲಾಗಿತ್ತು.

ಬಾಂಬೆ ಹೈಕೋರ್ಟ್ ಮಾರ್ಚ್‌ನಲ್ಲಿ ಈ ಐಟಿ ಶೋಕಾಸ್ ನೋಟಿಸ್ ಮತ್ತು ದಂಡದ ಬೇಡಿಕೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರಿಂದ ಅನಿಲ್‌ ಅಂಬಾನಿ ಒಂದಿಷ್ಟು ನಿಟ್ಟುಸಿರು ಬಿಟ್ಟಿದ್ದರು.

andolanait

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

37 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

1 hour ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

1 hour ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

1 hour ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

1 hour ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago