BREAKING NEWS

‘ಫೆಮಾ’ ಪ್ರಕರಣ: ಅನಿಲ್‌ ಅಂಬಾನಿ ವಿಚಾರಣೆ ನಡೆಸಿದ ಇ.ಡಿ

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು ತಿಳಿಸಿವೆ.

ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ 64 ವರ್ಷದ ಅನಿಲ್‌ ಅಂಬಾನಿ ಬಂದಿದ್ದರು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಹೊಸ ಪ್ರಕರಣದ ಭಾಗವಾಗಿ ಅನಿಲ್‌ ಅಂಬಾನಿ ಹೇಳಿಕೆಯನ್ನು ದಾಖಲಿಸಲಾಗಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ. ಮುಖ್ಯಸ್ಥ, ಏಷ್ಯಾದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ಅವರ ಸಹೋದರನಾಗಿರುವ ಅನಿಲ್ ಅಂಬಾನಿ ಅವರು ಬೆಳಿಗ್ಗೆ 10 ಗಂಟೆಗೆ ಜಾರಿ ನಿರ್ದೇಶನಾಲಯದ ಮುಂಬೈ ಕಚೇರಿಯನ್ನು ತಲುಪಿದ್ದರು. ಅವರನ್ನು ವಿಚಾರಣೆ ನಡೆಸುತ್ತಿದ್ದಾಗ ಅವರ ಕಚೇರಿ ಸಿಬ್ಬಂದಿ ಹೊರಗೆ ಅವರಿಗಾಗಿ ಕಾಯುತ್ತಿದ್ದರು ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿಯೂ ಈ ಹಿಂದೆ 2020ರಲ್ಲಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಕಳೆದ ವರ್ಷದ ಆಗಸ್ಟ್‌ನಲ್ಲಿ ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದಡಿ ಅನಿಲ್‌ ಅಂಬಾನಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಕಪ್ಪುಹಣ ತಡೆ ಕಾಯ್ದೆಯಡಿ ಈ ನೋಟಿಸ್‌ ನೀಡಲಾಗಿತ್ತು.

ಬಾಂಬೆ ಹೈಕೋರ್ಟ್ ಮಾರ್ಚ್‌ನಲ್ಲಿ ಈ ಐಟಿ ಶೋಕಾಸ್ ನೋಟಿಸ್ ಮತ್ತು ದಂಡದ ಬೇಡಿಕೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರಿಂದ ಅನಿಲ್‌ ಅಂಬಾನಿ ಒಂದಿಷ್ಟು ನಿಟ್ಟುಸಿರು ಬಿಟ್ಟಿದ್ದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

8 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

18 hours ago