BREAKING NEWS

ಭ್ರೂಣ ಹತ್ಯೆ ಪ್ರಕರಣ ಸಿಐಡಿಗೆ, ಬೈಯ್ಯಪ್ಪನಹಳ್ಳಿ ಪೊಲೀಸರಿಂದ ತನಿಖೆ ಅಸಾಧ್ಯ : ಚಲುವರಾಯಸ್ವಾಮಿ

ಮಂಡ್ಯ : ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ಅಥವಾ ಬೇರೆ ತನಿಖಾ ಸಂಸ್ಥೆಗೆ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭ್ರೂಣ ಹತ್ಯೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಳೇ ಮೈಸೂರು ಭಾಗದ ಮರ‍್ನಾಲ್ಕು ಜಿಲ್ಲೆಗಳ ಹೆಸರು ಥಳುಕು ಹಾಕಿಕೊಂಡಿರುವ ಕಾರಣ ಮಂಡ್ಯ ಜಿಲ್ಲೆ ಅಥವಾ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಿಸಿದರು.

ಆರೋಪಿಗಳ ಪೈಕಿ ಮಂಡ್ಯ ಜಿಲ್ಲೆಯವರೆಂದು ಹೇಳಲಾಗಿರುವ ಮಂಡ್ಯ ತಾಲ್ಲೂಕಿನ ಹುಳ್ಳೇನಹಳ್ಳಿಯ ನಯನ್‌ಕುಮಾರ್ ಹಾಗೂ ಪಾಂಡವಪುರ ತಾಲ್ಲೂಕು ಸುಂಕಾತೊಣ್ಣೂರು ಗ್ರಾಮದ ನವೀನ್‌ಕುಮಾರ್ ಇಬ್ಬರು ಇದ್ದಾರೆ. ಉಳಿದಂತೆ ಪ್ರಮುಖ ಆರೋಪಿ ಶಿವನಂಜೇಗೌಡ ಮೈಸೂರಿನವನು, ಮೂಲ ಮಳವಳ್ಳಿ ತಾಲ್ಲೂಕಿನವನಾಗಿದ್ದಾನೆ. ದಾವಣಗೆರೆಯ ವೀರೇಶ್, ತಮಿಳುನಾಡು ಮೂಲದ ಡಾ. ತುಳಸೀರಾಂ, ಮೀನಾ, ಚಂದನ್ ಬಲ್ಲಾಳ್, ತುಕಾರಾಂ ಸೇರಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ಸಿಬ್ಬಂದಿ ಇದ್ದಾರೆ. ಈ ಪ್ರಕರಣ ಕೇವಲ ಮಂಡ್ಯಕ್ಕೆ ಸೀಮಿತವಾಗಿಲ್ಲ. ನಾಲ್ಕೈದು ಜಿಲ್ಲೆಗಳು ಆವರಿಸಿಕೊಂಡಿದೆ ಎಂದು ವಿವರಿಸಿದರು.

ಮಂಡ್ಯದಲ್ಲಿ ಭ್ರೂಣ ಹತ್ಯೆ ನಡೆದಿಲ್ಲ: ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ನಡೆದಿಲ್ಲ. ಆದರೆ, ಸ್ಕ್ಯಾನಿಂಗ್‌ ಮಾಡಿದ್ದಾರೆಂಬ ಆರೋಪ ಮಾತ್ರ ಬಂದಿದೆ. ಅದಕ್ಕೂ ಯಾವುದೇ ಶಾಶ್ವತ ಸ್ಥಳ ಇಲ್ಲ. ಮೊಬೈಲ್ ಸ್ಕ್ಯಾನಿಂಗ್‌ ಯಂತ್ರ ಬಳಸಿ ಬೇರೆ ಬೇರೆ ಸ್ಥಳದಲ್ಲಿ ಮಾಡಿದ್ದಾರೆ. ಇನ್ನು ಆಪರೇಷನ್ ಮಾತ್ರ ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ.

ಸ್ಕ್ಯಾನಿಂಗ್‌ ಮಾತ್ರ ಹುಳ್ಳೇನಹಳ್ಳಿಯ ಆಲೆಮನೆಯಲ್ಲಿ ನಡೆದಿದೆ. ಅಲ್ಲಿ ಬಿಹಾರ ಮೂಲದ ಕಾರ್ಮಿಕರು ಇದ್ದಾರೆ. ಸ್ಕ್ಯಾನಿಂಗ್‌ ಮಾಡುತ್ತಿದ್ದರೆಂದು ಹೇಳಲಾದ ಕೊಠಡಿಯಲ್ಲಿ ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳೂ ಸಿಕ್ಕಿಲ್ಲ. ಎಲ್ಲವನ್ನೂ ಬೈಯ್ಯಪ್ಪನಹಳ್ಳಿ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆಯೂ ಮಾಹಿತಿ ಇದೆ. ಅದನ್ನು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳನ್ನು ಕರೆತಂದು ಇಲ್ಲಿ ಒಂದಷ್ಟು ವಿಚಾರಣೆಗೊಳಪಡಿಸಿ ಮತ್ತಷ್ಟು ಮಾಹಿತಿ ಪಡೆಯಬಹುದು ಅಷ್ಟೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

5 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

5 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

5 hours ago