BREAKING NEWS

ಭ್ರೂಣ ಹತ್ಯೆ ಪ್ರಕರಣ ಸಿಐಡಿಗೆ, ಬೈಯ್ಯಪ್ಪನಹಳ್ಳಿ ಪೊಲೀಸರಿಂದ ತನಿಖೆ ಅಸಾಧ್ಯ : ಚಲುವರಾಯಸ್ವಾಮಿ

ಮಂಡ್ಯ : ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ಅಥವಾ ಬೇರೆ ತನಿಖಾ ಸಂಸ್ಥೆಗೆ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭ್ರೂಣ ಹತ್ಯೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಳೇ ಮೈಸೂರು ಭಾಗದ ಮರ‍್ನಾಲ್ಕು ಜಿಲ್ಲೆಗಳ ಹೆಸರು ಥಳುಕು ಹಾಕಿಕೊಂಡಿರುವ ಕಾರಣ ಮಂಡ್ಯ ಜಿಲ್ಲೆ ಅಥವಾ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಿಸಿದರು.

ಆರೋಪಿಗಳ ಪೈಕಿ ಮಂಡ್ಯ ಜಿಲ್ಲೆಯವರೆಂದು ಹೇಳಲಾಗಿರುವ ಮಂಡ್ಯ ತಾಲ್ಲೂಕಿನ ಹುಳ್ಳೇನಹಳ್ಳಿಯ ನಯನ್‌ಕುಮಾರ್ ಹಾಗೂ ಪಾಂಡವಪುರ ತಾಲ್ಲೂಕು ಸುಂಕಾತೊಣ್ಣೂರು ಗ್ರಾಮದ ನವೀನ್‌ಕುಮಾರ್ ಇಬ್ಬರು ಇದ್ದಾರೆ. ಉಳಿದಂತೆ ಪ್ರಮುಖ ಆರೋಪಿ ಶಿವನಂಜೇಗೌಡ ಮೈಸೂರಿನವನು, ಮೂಲ ಮಳವಳ್ಳಿ ತಾಲ್ಲೂಕಿನವನಾಗಿದ್ದಾನೆ. ದಾವಣಗೆರೆಯ ವೀರೇಶ್, ತಮಿಳುನಾಡು ಮೂಲದ ಡಾ. ತುಳಸೀರಾಂ, ಮೀನಾ, ಚಂದನ್ ಬಲ್ಲಾಳ್, ತುಕಾರಾಂ ಸೇರಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ಸಿಬ್ಬಂದಿ ಇದ್ದಾರೆ. ಈ ಪ್ರಕರಣ ಕೇವಲ ಮಂಡ್ಯಕ್ಕೆ ಸೀಮಿತವಾಗಿಲ್ಲ. ನಾಲ್ಕೈದು ಜಿಲ್ಲೆಗಳು ಆವರಿಸಿಕೊಂಡಿದೆ ಎಂದು ವಿವರಿಸಿದರು.

ಮಂಡ್ಯದಲ್ಲಿ ಭ್ರೂಣ ಹತ್ಯೆ ನಡೆದಿಲ್ಲ: ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ನಡೆದಿಲ್ಲ. ಆದರೆ, ಸ್ಕ್ಯಾನಿಂಗ್‌ ಮಾಡಿದ್ದಾರೆಂಬ ಆರೋಪ ಮಾತ್ರ ಬಂದಿದೆ. ಅದಕ್ಕೂ ಯಾವುದೇ ಶಾಶ್ವತ ಸ್ಥಳ ಇಲ್ಲ. ಮೊಬೈಲ್ ಸ್ಕ್ಯಾನಿಂಗ್‌ ಯಂತ್ರ ಬಳಸಿ ಬೇರೆ ಬೇರೆ ಸ್ಥಳದಲ್ಲಿ ಮಾಡಿದ್ದಾರೆ. ಇನ್ನು ಆಪರೇಷನ್ ಮಾತ್ರ ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ.

ಸ್ಕ್ಯಾನಿಂಗ್‌ ಮಾತ್ರ ಹುಳ್ಳೇನಹಳ್ಳಿಯ ಆಲೆಮನೆಯಲ್ಲಿ ನಡೆದಿದೆ. ಅಲ್ಲಿ ಬಿಹಾರ ಮೂಲದ ಕಾರ್ಮಿಕರು ಇದ್ದಾರೆ. ಸ್ಕ್ಯಾನಿಂಗ್‌ ಮಾಡುತ್ತಿದ್ದರೆಂದು ಹೇಳಲಾದ ಕೊಠಡಿಯಲ್ಲಿ ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳೂ ಸಿಕ್ಕಿಲ್ಲ. ಎಲ್ಲವನ್ನೂ ಬೈಯ್ಯಪ್ಪನಹಳ್ಳಿ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆಯೂ ಮಾಹಿತಿ ಇದೆ. ಅದನ್ನು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳನ್ನು ಕರೆತಂದು ಇಲ್ಲಿ ಒಂದಷ್ಟು ವಿಚಾರಣೆಗೊಳಪಡಿಸಿ ಮತ್ತಷ್ಟು ಮಾಹಿತಿ ಪಡೆಯಬಹುದು ಅಷ್ಟೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

48 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago