BREAKING NEWS

ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಕೇಸ್​: ಡಾ ಶ್ರೀನಿವಾಸ್ ಬಂಧನ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ.ಶ್ರೀನಿವಾಸ್​ರ​ನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆನ್ನಸಂದ್ರ ಗ್ರಾಮದಲ್ಲಿ ಅಡಗಿದ್ದ ಡಾ.ಶ್ರೀನಿವಾಸ್‌ ಅಡಗಿದ್ದು, ಆತನನನ್ನು ಪೊಲೀಸರು ಬಂಧಿಸಿದ್ದಾರೆ.

ಇವರನ್ನು​ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್​ ಅನಿತಾ, ಎ3 ನರ್ಸ್​​ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೈಸೂರು, ಮಂಡ್ಯದಲ್ಲಷ್ಟೇ ಅಲ್ಲದೇ ಬೆಂಗಳೂರಿನ ಮಡಿಲಲ್ಲೇ ಭ್ರೂಣ ಹತ್ಯೆ ಕೃತ್ಯ ನಡೆದಿತ್ತು. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ಎಸ್​ಪಿಜಿ ಆಸ್ಪತ್ರೆಯಲ್ಲೇ ನಡೆದಿದ್ದ ರಕ್ತಸಿಕ್ತ ದಂಧೆ ಬೆಚ್ಚಿ ಬೀಳುವಂತಿತ್ತು.

ಖಾಸಗಿ ಕ್ಲಿನಿಕ್​ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ ಆಗಿದ್ದವು. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದ್ದವು. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿತ್ತು.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

40 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

53 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

59 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago