BREAKING NEWS

ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಕೇಸ್​: ಡಾ ಶ್ರೀನಿವಾಸ್ ಬಂಧನ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ.ಶ್ರೀನಿವಾಸ್​ರ​ನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆನ್ನಸಂದ್ರ ಗ್ರಾಮದಲ್ಲಿ ಅಡಗಿದ್ದ ಡಾ.ಶ್ರೀನಿವಾಸ್‌ ಅಡಗಿದ್ದು, ಆತನನನ್ನು ಪೊಲೀಸರು ಬಂಧಿಸಿದ್ದಾರೆ.

ಇವರನ್ನು​ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್​ ಅನಿತಾ, ಎ3 ನರ್ಸ್​​ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೈಸೂರು, ಮಂಡ್ಯದಲ್ಲಷ್ಟೇ ಅಲ್ಲದೇ ಬೆಂಗಳೂರಿನ ಮಡಿಲಲ್ಲೇ ಭ್ರೂಣ ಹತ್ಯೆ ಕೃತ್ಯ ನಡೆದಿತ್ತು. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ಎಸ್​ಪಿಜಿ ಆಸ್ಪತ್ರೆಯಲ್ಲೇ ನಡೆದಿದ್ದ ರಕ್ತಸಿಕ್ತ ದಂಧೆ ಬೆಚ್ಚಿ ಬೀಳುವಂತಿತ್ತು.

ಖಾಸಗಿ ಕ್ಲಿನಿಕ್​ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ ಆಗಿದ್ದವು. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದ್ದವು. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿತ್ತು.

andolanait

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

2 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

3 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

3 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

3 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

4 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

5 hours ago