ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ.ಶ್ರೀನಿವಾಸ್ರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚೆನ್ನಸಂದ್ರ ಗ್ರಾಮದಲ್ಲಿ ಅಡಗಿದ್ದ ಡಾ.ಶ್ರೀನಿವಾಸ್ ಅಡಗಿದ್ದು, ಆತನನನ್ನು ಪೊಲೀಸರು ಬಂಧಿಸಿದ್ದಾರೆ.
ಇವರನ್ನು ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್ ಅನಿತಾ, ಎ3 ನರ್ಸ್ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು, ಮಂಡ್ಯದಲ್ಲಷ್ಟೇ ಅಲ್ಲದೇ ಬೆಂಗಳೂರಿನ ಮಡಿಲಲ್ಲೇ ಭ್ರೂಣ ಹತ್ಯೆ ಕೃತ್ಯ ನಡೆದಿತ್ತು. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.
ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ಎಸ್ಪಿಜಿ ಆಸ್ಪತ್ರೆಯಲ್ಲೇ ನಡೆದಿದ್ದ ರಕ್ತಸಿಕ್ತ ದಂಧೆ ಬೆಚ್ಚಿ ಬೀಳುವಂತಿತ್ತು.
ಖಾಸಗಿ ಕ್ಲಿನಿಕ್ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷನ್ ಪತ್ತೆ ಆಗಿದ್ದವು. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದ್ದವು. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…