BREAKING NEWS

ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಕೇಸ್​: ಡಾ ಶ್ರೀನಿವಾಸ್ ಬಂಧನ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ.ಶ್ರೀನಿವಾಸ್​ರ​ನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆನ್ನಸಂದ್ರ ಗ್ರಾಮದಲ್ಲಿ ಅಡಗಿದ್ದ ಡಾ.ಶ್ರೀನಿವಾಸ್‌ ಅಡಗಿದ್ದು, ಆತನನನ್ನು ಪೊಲೀಸರು ಬಂಧಿಸಿದ್ದಾರೆ.

ಇವರನ್ನು​ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್​ ಅನಿತಾ, ಎ3 ನರ್ಸ್​​ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೈಸೂರು, ಮಂಡ್ಯದಲ್ಲಷ್ಟೇ ಅಲ್ಲದೇ ಬೆಂಗಳೂರಿನ ಮಡಿಲಲ್ಲೇ ಭ್ರೂಣ ಹತ್ಯೆ ಕೃತ್ಯ ನಡೆದಿತ್ತು. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ಎಸ್​ಪಿಜಿ ಆಸ್ಪತ್ರೆಯಲ್ಲೇ ನಡೆದಿದ್ದ ರಕ್ತಸಿಕ್ತ ದಂಧೆ ಬೆಚ್ಚಿ ಬೀಳುವಂತಿತ್ತು.

ಖಾಸಗಿ ಕ್ಲಿನಿಕ್​ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ ಆಗಿದ್ದವು. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದ್ದವು. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿತ್ತು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

14 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

14 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago