BREAKING NEWS

ಎಸ್‌ಪಿ, ಸಿಇಒ, ಡಿಸಿಗಳಿಗೆ ಫೀಲ್ಡ್ ವರ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಮೈಸೂರು:  ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್‌ ವರ್ಕ್‌ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶನಿವಾರ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಸೂಚನೆ ನೀಡಿದರು.

ರೈತರನ್ನು ಕಚೇರಿಗೆ ಅಲೆಸಬೇಡಿ: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳೆಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟರು.

ಜನರಿಗೆ ಸಮಸ್ಯೆಯಾದರೆ ಮುಲಾಜಿಲ್ಲದೆ ಕ್ರಮ: ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ‌ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ: ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ ಪ್ರಮುಖ ಸೂಚನೆಗಳಿವು

  • ಅಧಿಕಾರಿಗಳು ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು. ಬರೀ ಕಚೇರಿಯಲ್ಲಿ ಕುಳಿತು ವರದಿ ಸಿದ್ದಪಡಿಸಬಾರದು.
  • ಎಸ್‌ಪಿ ಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ಠಾಣಾಧಿಕಾರಿ ಗಮನಕ್ಕೆ ಬಾರದಂತೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆ, ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಪೊಲೀಸರ ಬಗ್ಗೆ ರೌಡಿಗಳಿಗೆ ಭಯ ಇಲ್ಲದಿದ್ದರೆ ಪೊಲೀಸರು ಇದ್ದರೇನು, ಬಿಟ್ಟರೇನು?
  • ತಹಶೀಲ್ದಾರ್ ಕಚೇರಿಗಳಲ್ಲಿ ಎಷ್ಟು ಲಂಚ ನಡೆಯುತ್ತಿದೆ, ರೈತರಿಗೆ ಎಷ್ಟು ಗೋಳಾಡಿಸುತ್ತಿದ್ದಾರೆ ಎನ್ನುವುದು ಗೊತ್ತಾ ಜಿಲ್ಲಾಧಿಕಾರಿಗಳೇ ? ಆ ಬಗ್ಗೆ ಕ್ರಮಕೈಗೊಳ್ಳಿ.
  • ಕಳೆದ ವರ್ಷ ಬೆಳೆ ಹಾನಿ ಆದ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು. ತಾಂತ್ರಿಕ ಸಮಸ್ಯೆ ಕಾರಣದಿಂದ ಯಾರಿಗಾದರೂ ಪರಿಹಾರ ದೊರಕದಿದ್ದರೆ, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸಿ.
  • ಜೂನ್ ಆರಂಭದಲ್ಲಿ ಬರಬೇಕಾದ ಮಳೆ ಬಂದಿಲ್ಲ. ಇದರಿಂದ ಕುಡಿಯುವ ನೀರು ಮತ್ತು ಬೆಳೆಗೆ ನೀರು ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ.
  • ಮಳೆ ಬರುವವರೆಗೆ ಬೆಳೆಗಳಿಗೆ ಅಗತ್ಯ ನೀರು ಒದಗಿಸಿ, ಬೆಳೆ ನಷ್ಟ ಆಗದಂತೆ ಕ್ರಮ ವಹಿಸಿ. ಪ್ರಥಮ ಆಧ್ಯತೆ ಕುಡಿಯುವ ನೀರಿಗೆ ಒದಗಿಸಿ.
andolanait

Recent Posts

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

22 mins ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

32 mins ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

45 mins ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

1 hour ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

1 hour ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

2 hours ago