BREAKING NEWS

ಎಸ್‌ಪಿ, ಸಿಇಒ, ಡಿಸಿಗಳಿಗೆ ಫೀಲ್ಡ್ ವರ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಮೈಸೂರು:  ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್‌ ವರ್ಕ್‌ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶನಿವಾರ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಸೂಚನೆ ನೀಡಿದರು.

ರೈತರನ್ನು ಕಚೇರಿಗೆ ಅಲೆಸಬೇಡಿ: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳೆಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟರು.

ಜನರಿಗೆ ಸಮಸ್ಯೆಯಾದರೆ ಮುಲಾಜಿಲ್ಲದೆ ಕ್ರಮ: ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ‌ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ: ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ ಪ್ರಮುಖ ಸೂಚನೆಗಳಿವು

  • ಅಧಿಕಾರಿಗಳು ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು. ಬರೀ ಕಚೇರಿಯಲ್ಲಿ ಕುಳಿತು ವರದಿ ಸಿದ್ದಪಡಿಸಬಾರದು.
  • ಎಸ್‌ಪಿ ಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ಠಾಣಾಧಿಕಾರಿ ಗಮನಕ್ಕೆ ಬಾರದಂತೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆ, ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಪೊಲೀಸರ ಬಗ್ಗೆ ರೌಡಿಗಳಿಗೆ ಭಯ ಇಲ್ಲದಿದ್ದರೆ ಪೊಲೀಸರು ಇದ್ದರೇನು, ಬಿಟ್ಟರೇನು?
  • ತಹಶೀಲ್ದಾರ್ ಕಚೇರಿಗಳಲ್ಲಿ ಎಷ್ಟು ಲಂಚ ನಡೆಯುತ್ತಿದೆ, ರೈತರಿಗೆ ಎಷ್ಟು ಗೋಳಾಡಿಸುತ್ತಿದ್ದಾರೆ ಎನ್ನುವುದು ಗೊತ್ತಾ ಜಿಲ್ಲಾಧಿಕಾರಿಗಳೇ ? ಆ ಬಗ್ಗೆ ಕ್ರಮಕೈಗೊಳ್ಳಿ.
  • ಕಳೆದ ವರ್ಷ ಬೆಳೆ ಹಾನಿ ಆದ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು. ತಾಂತ್ರಿಕ ಸಮಸ್ಯೆ ಕಾರಣದಿಂದ ಯಾರಿಗಾದರೂ ಪರಿಹಾರ ದೊರಕದಿದ್ದರೆ, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸಿ.
  • ಜೂನ್ ಆರಂಭದಲ್ಲಿ ಬರಬೇಕಾದ ಮಳೆ ಬಂದಿಲ್ಲ. ಇದರಿಂದ ಕುಡಿಯುವ ನೀರು ಮತ್ತು ಬೆಳೆಗೆ ನೀರು ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ.
  • ಮಳೆ ಬರುವವರೆಗೆ ಬೆಳೆಗಳಿಗೆ ಅಗತ್ಯ ನೀರು ಒದಗಿಸಿ, ಬೆಳೆ ನಷ್ಟ ಆಗದಂತೆ ಕ್ರಮ ವಹಿಸಿ. ಪ್ರಥಮ ಆಧ್ಯತೆ ಕುಡಿಯುವ ನೀರಿಗೆ ಒದಗಿಸಿ.
andolanait

Recent Posts

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 min ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

12 mins ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

16 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…

59 mins ago

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

3 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

3 hours ago