ಮೈಸೂರು: ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶನಿವಾರ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.
ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಸೂಚನೆ ನೀಡಿದರು.
ರೈತರನ್ನು ಕಚೇರಿಗೆ ಅಲೆಸಬೇಡಿ: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳೆಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟರು.
ಜನರಿಗೆ ಸಮಸ್ಯೆಯಾದರೆ ಮುಲಾಜಿಲ್ಲದೆ ಕ್ರಮ: ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ: ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ ಪ್ರಮುಖ ಸೂಚನೆಗಳಿವು
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…