ಮುಜಾಫರ್ಪುರ : ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.
ಮುಜಾಫರ್ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಈ ಹೇಳಿಕೆಗಳು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.
ರಾಜಕೀಯ ದಿಗ್ಗಜರು ಮತ್ತು ಇತರ ಸೆಲೆಬ್ರಿಟಿಗಳ ವಿರುದ್ಧದ ದೂರುಗಳಿಗಾಗಿ ಸುದ್ದಿಯಲ್ಲಿರುವ ಓಜಾ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ತಮಿಳುನಾಡು ಸಿಎಂ ಮತ್ತು ಕ್ಯಾಬಿನೆಟ್ ಸಚಿವರೂ ಆಗಿರುವ ಅವರ ಪುತ್ರನನ್ನು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.
ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ , ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಶನಿವಾರ ಆರೋಪಿಸಿದ್ದರು. ಅಲ್ಲದೇ, ಅದನ್ನು ಕೊರೊನಾವೈರಸ್, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರಕ್ಕೆ ಹೋಲಿಸಿದ್ದರು.
ಉದಯ್ ಸ್ಟಾಲಿನ್ ಅವರ ಹೇಳಿಕೆಗೆ ದೇಶಾದ್ಯಂತ ಬಿಜೆಪಿಯಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ. ಕೆಲವು ನಾಯಕರು ಇದು ನರಮೇಧದ ಕರೆ ಎಂದು ಆರೋಪಿಸಿದ್ದರೆ, ಮತ್ತೆ ಕೆಲವರರು ಉದಯನಿಧಿ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…