BREAKING NEWS

ಎಲೆತೋಟದ ಕರು ಭಕ್ಷಕ ಮೊಸಳೆ ಕೊನೆಗೂ ಸೆರೆ

ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ

ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ ವೇಳೆಗೆ ಮೊಸಳೆಯನ್ನು ಹಿಡಿಯಲು ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಎಲೆ ತೋಟದ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಈ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಗುರುವಾರ ಜೆಸಿಬಿ ಬಳಸಿ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಸ್ಥಳೀಯರಾದ ಮಧುಕರ್ ಮತ್ತು ಸ್ನೇಹಿತರು ಕಾರ್ಯಾಚರಣೆಯಲ್ಲಿ ನೆರವು ನೀಡಿದ್ದರು.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿತ್ತು. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿದ್ದರಿಂದ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಈ ಕಾರಣದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಸರೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.

ಇದೀಗ ಸೆರೆಯಾಗಿರುವ ಮೊಸಳೆ ಸುಮಾರು ಎಂಟೂವರೆ ಅಡಿಗಳಷ್ಟು ಉದ್ದವಿದೆ. ಮೃಗಾಲಯದಲ್ಲಿ ಇದರ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿದ ಬಳಿಕ ಕಬಿನಿ ಹಿನ್ನೀರಿಗೆ ಬಿಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ.



ಎಲೆತೋಟದ ಮೊಸಳೆ ಕಬಿನಿ ಹಿನ್ನೀರಿಗೆ
ಮೈಸೂರಿನ ಜನತೆಯಲ್ಲಿ ಆತಂಕ ಮೂಡಿಸಿದ್ದ ಮೊಸಳೆಯನ್ನು ಸೆರೆ ಹಿಡಿಯಲು ನಮ್ಮ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ರಾಜ ಕಾಲುವೆಯ ಕೊಳಚೆ ನೀರಿನಲ್ಲಿಯೇ ಇರುತ್ತಿದ್ದ ಈ ಮೊಸಳೆಯನ್ನು ಹಿಡಿಯಲು ನಮ್ಮ ಸಿಬ್ಬಂದಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಈ ಮೊಸಳೆಯ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿಕೊಂಡ ಬಳಿಕ ಕಬಿನಿ ಹಿನ್ನೀರಿನಲ್ಲಿ ಬಿಡಲಾಗುವುದು.
-ಕರಿಕಾಳನ್, ಡಿಸಿಎಫ್ ಮೈಸೂರು

andolanait

Recent Posts

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

23 mins ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

27 mins ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

1 hour ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

2 hours ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

3 hours ago