ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ
ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ ವೇಳೆಗೆ ಮೊಸಳೆಯನ್ನು ಹಿಡಿಯಲು ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಎಲೆ ತೋಟದ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಈ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಗುರುವಾರ ಜೆಸಿಬಿ ಬಳಸಿ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಸ್ಥಳೀಯರಾದ ಮಧುಕರ್ ಮತ್ತು ಸ್ನೇಹಿತರು ಕಾರ್ಯಾಚರಣೆಯಲ್ಲಿ ನೆರವು ನೀಡಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿತ್ತು. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿದ್ದರಿಂದ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಈ ಕಾರಣದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಸರೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಇದೀಗ ಸೆರೆಯಾಗಿರುವ ಮೊಸಳೆ ಸುಮಾರು ಎಂಟೂವರೆ ಅಡಿಗಳಷ್ಟು ಉದ್ದವಿದೆ. ಮೃಗಾಲಯದಲ್ಲಿ ಇದರ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿದ ಬಳಿಕ ಕಬಿನಿ ಹಿನ್ನೀರಿಗೆ ಬಿಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ.
ಎಲೆತೋಟದ ಮೊಸಳೆ ಕಬಿನಿ ಹಿನ್ನೀರಿಗೆ
ಮೈಸೂರಿನ ಜನತೆಯಲ್ಲಿ ಆತಂಕ ಮೂಡಿಸಿದ್ದ ಮೊಸಳೆಯನ್ನು ಸೆರೆ ಹಿಡಿಯಲು ನಮ್ಮ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ರಾಜ ಕಾಲುವೆಯ ಕೊಳಚೆ ನೀರಿನಲ್ಲಿಯೇ ಇರುತ್ತಿದ್ದ ಈ ಮೊಸಳೆಯನ್ನು ಹಿಡಿಯಲು ನಮ್ಮ ಸಿಬ್ಬಂದಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಈ ಮೊಸಳೆಯ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿಕೊಂಡ ಬಳಿಕ ಕಬಿನಿ ಹಿನ್ನೀರಿನಲ್ಲಿ ಬಿಡಲಾಗುವುದು.
-ಕರಿಕಾಳನ್, ಡಿಸಿಎಫ್ ಮೈಸೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…