ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ
ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ ವೇಳೆಗೆ ಮೊಸಳೆಯನ್ನು ಹಿಡಿಯಲು ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಎಲೆ ತೋಟದ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಈ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಗುರುವಾರ ಜೆಸಿಬಿ ಬಳಸಿ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಸ್ಥಳೀಯರಾದ ಮಧುಕರ್ ಮತ್ತು ಸ್ನೇಹಿತರು ಕಾರ್ಯಾಚರಣೆಯಲ್ಲಿ ನೆರವು ನೀಡಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿತ್ತು. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿದ್ದರಿಂದ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಈ ಕಾರಣದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಸರೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಇದೀಗ ಸೆರೆಯಾಗಿರುವ ಮೊಸಳೆ ಸುಮಾರು ಎಂಟೂವರೆ ಅಡಿಗಳಷ್ಟು ಉದ್ದವಿದೆ. ಮೃಗಾಲಯದಲ್ಲಿ ಇದರ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿದ ಬಳಿಕ ಕಬಿನಿ ಹಿನ್ನೀರಿಗೆ ಬಿಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ.
ಎಲೆತೋಟದ ಮೊಸಳೆ ಕಬಿನಿ ಹಿನ್ನೀರಿಗೆ
ಮೈಸೂರಿನ ಜನತೆಯಲ್ಲಿ ಆತಂಕ ಮೂಡಿಸಿದ್ದ ಮೊಸಳೆಯನ್ನು ಸೆರೆ ಹಿಡಿಯಲು ನಮ್ಮ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ರಾಜ ಕಾಲುವೆಯ ಕೊಳಚೆ ನೀರಿನಲ್ಲಿಯೇ ಇರುತ್ತಿದ್ದ ಈ ಮೊಸಳೆಯನ್ನು ಹಿಡಿಯಲು ನಮ್ಮ ಸಿಬ್ಬಂದಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಈ ಮೊಸಳೆಯ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿಕೊಂಡ ಬಳಿಕ ಕಬಿನಿ ಹಿನ್ನೀರಿನಲ್ಲಿ ಬಿಡಲಾಗುವುದು.
-ಕರಿಕಾಳನ್, ಡಿಸಿಎಫ್ ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…