BREAKING NEWS

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ: ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದರು.

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದರು.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮವಹಿಸಲಾಗುವುದು. ಅಲ್ಲದೆ, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago