ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ ಮೀರಾ ರೋಡ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ.
ಮಂಗಳವಾರ ಮುಂಜಾನೆ ತಮಿಳುನಾಡಿನ ಬಿಜೆಪಿ ನಿಯೋಗವು ಸನಾತನ ಧರ್ಮದ ವಿರುದ್ಧ ಸ್ಟಾಲಿನ್ ಹೇಳಿಕೆ ಕುರಿತು ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ರಾಜ್ಯ ಪೊಲೀಸರಿಗೆ ಮನವಿ ಪತ್ರ ನೀಡಿದೆ.
ಸೆಪ್ಟೆಂಬರ್ 2ರಂದು ಚೆನ್ನೈನಲ್ಲಿ ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭ ಸ್ಟಾಲಿನ್ ಸನಾತನ ಧರ್ಮವನ್ನು ಕೊರೊನಾ ವೈರಸ್, ಮಲೇರಿಯಾ ಹಾಗೂ ಡೆಂಗ್ಯೂ ರೋಗಕ್ಕೆ ಹೋಲಿಸಿ ಮಾತನಾಡಿದ್ದರು. ಇವರ ಈ ವಿವಾದಾತ್ಮಕ ಹೇಳಿಕೆಗೆ ದೇಶವ್ಯಾಪಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…