BREAKING NEWS

ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್

ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ ಮೀರಾ ರೋಡ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಮುಂಜಾನೆ ತಮಿಳುನಾಡಿನ ಬಿಜೆಪಿ ನಿಯೋಗವು ಸನಾತನ ಧರ್ಮದ ವಿರುದ್ಧ ಸ್ಟಾಲಿನ್ ಹೇಳಿಕೆ ಕುರಿತು ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ರಾಜ್ಯ ಪೊಲೀಸರಿಗೆ ಮನವಿ ಪತ್ರ ನೀಡಿದೆ.

ಸೆಪ್ಟೆಂಬರ್ 2ರಂದು ಚೆನ್ನೈನಲ್ಲಿ ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭ ಸ್ಟಾಲಿನ್ ಸನಾತನ ಧರ್ಮವನ್ನು ಕೊರೊನಾ ವೈರಸ್, ಮಲೇರಿಯಾ ಹಾಗೂ ಡೆಂಗ್ಯೂ ರೋಗಕ್ಕೆ ಹೋಲಿಸಿ ಮಾತನಾಡಿದ್ದರು. ಇವರ ಈ ವಿವಾದಾತ್ಮಕ ಹೇಳಿಕೆಗೆ ದೇಶವ್ಯಾಪಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

lokesh

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago