ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ ಮೀರಾ ರೋಡ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ.
ಮಂಗಳವಾರ ಮುಂಜಾನೆ ತಮಿಳುನಾಡಿನ ಬಿಜೆಪಿ ನಿಯೋಗವು ಸನಾತನ ಧರ್ಮದ ವಿರುದ್ಧ ಸ್ಟಾಲಿನ್ ಹೇಳಿಕೆ ಕುರಿತು ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ರಾಜ್ಯ ಪೊಲೀಸರಿಗೆ ಮನವಿ ಪತ್ರ ನೀಡಿದೆ.
ಸೆಪ್ಟೆಂಬರ್ 2ರಂದು ಚೆನ್ನೈನಲ್ಲಿ ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭ ಸ್ಟಾಲಿನ್ ಸನಾತನ ಧರ್ಮವನ್ನು ಕೊರೊನಾ ವೈರಸ್, ಮಲೇರಿಯಾ ಹಾಗೂ ಡೆಂಗ್ಯೂ ರೋಗಕ್ಕೆ ಹೋಲಿಸಿ ಮಾತನಾಡಿದ್ದರು. ಇವರ ಈ ವಿವಾದಾತ್ಮಕ ಹೇಳಿಕೆಗೆ ದೇಶವ್ಯಾಪಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…