BREAKING NEWS

ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್

ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕ್‌ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.

ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago