BREAKING NEWS

ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್

ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕ್‌ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.

ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago