ಆಂಧ್ರಪ್ರದೇಶ : ಆಂಧ್ರಪ್ರದೇಶದ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಅಧಿಕ ಬೈಕ್ಗಳು ಸುಟ್ಟು ಕರಕಲಾಗಿವೆ. ಆದರೆ, ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯ ಕೆಪಿ ನಗರ ಪ್ರದೇಶದಲ್ಲಿ ಗುರುವಾರ ಮುಂಜಾನೆ ಟಿವಿಎಸ್ ಶೋರೂಂ ಮತ್ತು ಗೋಡೌನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಪೊಲೀಸರ ಪ್ರಕಾರ, ಶೋರೂಂನ ಮೊದಲ ಮಹಡಿಯಿಂದ ಬೆಂಕಿ ಕಾಣಿಸಿಕೊಂಡಿತು ಮತ್ತು ಶೀಘ್ರದಲ್ಲೇ ಪಕ್ಕದ ಗೋಡೌನ್ಗೆ ವ್ಯಾಪಿಸಿತು. ಭದ್ರತಾ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕನಿಷ್ಠ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದವು. ಗೋಡೌನ್ನಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಕೂಡ ಸಂಗ್ರಹಿಸಿಟ್ಟಿದ್ದರಿಂದ ಬೆಂಕಿ ಮತ್ತಷ್ಟು ಹರಡಲು ಕಾರಣವಾಯಿತು.
ಶೋರೂಂ, ಗೋಡೌನ್, ಸರ್ವಿಸ್ ಸೆಂಟರ್ ಒಂದೇ ಸ್ಥಳದಲ್ಲಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ನಿಂತಿದ್ದವು. ಇದು ವಿಜಯವಾಡ ಮತ್ತು ಏಕೀಕೃತ ಕೃಷ್ಣಾ ಜಿಲ್ಲೆಯ ಟಿವಿಎಸ್ ವಾಹನಗಳ ಮುಖ್ಯ ಕೇಂದ್ರವಾಗಿತ್ತು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೆಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಚಾರ್ಜ್ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶೋರೂಂ ಮಾಲೀಕರಿಗೆ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…