BREAKING NEWS

ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ : 32 ಮಂದಿ ಸಜೀವ ದಹನ

ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.

ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.

ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.

lokesh

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

11 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago