BREAKING NEWS

ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ : 32 ಮಂದಿ ಸಜೀವ ದಹನ

ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.

ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.

ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.

lokesh

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

9 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

10 hours ago