ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.
ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.
ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…