ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.
ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.
ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…