ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.
ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.
ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…