Mysore
20
overcast clouds
Light
Dark

ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಬೆಂಗಳೂರು : ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲಿನ ಸಂಖ್ಯೆ: 11301 ) ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಎಲ್ಲರನ್ನೂ ಆತಂಕಗೊಳಿಸಿದ ಘಟನೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ.

ನಿಲ್ದಾಣಕ್ಕೆ ಬೆಳಗಿನ ಜಾವ 5.45ರ ಸುಮಾರಿಗೆ ರೈಲು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ಆಗಮಿಸಿತು. ರೈಲು ಆಗಮಿಸಿದ ಎರಡು ಗಂಟೆಗಳ ನಂತರ ಅಂದರೆ ಸುಮಾರು 7.30 ಸುಮಾರಿಗೆ ರೈಲಿನ ಬಿ 1 ಹಾಗೂ ಬಿ2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು.

ಕೂಡಲೇ ರೈಲ್ವೆ ನಿಲ್ದಾಣದ ಸಿಬ್ಬಂದಿಯು ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಬೋಗಿಗಳಲ್ಲಿ ಬೆಂಕಿ ಹೇಗೆ ಬಂತು ಎಂಬುದನ್ನು ತಿಳಿಯಲು ರೈಲ್ವೆ ಇಲಾಖೆಯು ತನಿಖೆಗೆ ಆದೇಶ ನೀಡಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ನೈರುತ್ಯ ರೈಲ್ವೆ ವಿಭಾಗ, ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ನಾವು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದೆವು. ಕೂಡಲೇ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿವೆ. ರೈಲು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ ಸುಮಾರು 2 ಗಂಟೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಅಷ್ಟರಲ್ಲಿ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೆಳಗಿಳಿದಿದ್ದರು. ಹಾಗಾಗಿ, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ