BREAKING NEWS

ಬಾಂಗ್ಲಾದೇಶದ ಅತಿದೊಡ್ಡ ಜವಳಿ ಮಾರುಕಟ್ಟೆಗೆ ಬೆಂಕಿ

ಢಾಕಾ : ಬಾಂಗ್ಲಾದೇಶದ ಅತಿದೊಡ್ಡ ಬಟ್ಟೆ ಮಾರುಕಟ್ಟೆಗಳಲ್ಲಿ ಒಂದಾದ ‘ಬಂಗಾಬಜಾರ್‌’ನಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಢಾಕಾದಲ್ಲಿರುವ ಈ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6.10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿರುವುದಾಗಿ ಅಲ್ಲಿನ ಪತ್ರಿಕೆಯೊಂದರಲ್ಲಿ ವರದಿಯಾಗಿದೆ.
ದುರಂತಕ್ಕೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ನಂದಿಸಲು 47 ಅಗ್ನಿಶಾಮಕ ಘಟಕಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ನಿಯಂತ್ರಣ ಕೊಠಡಿಯ ಅಧಿಕಾರಿ ರಫಿ ಅಲ್‌ ಫಾರುಕ್‌ ಹೇಳಿಕೆ ನೀಡಿದ್ದಾರೆ.

ಮಾರುಕಟ್ಟೆಯಲ್ಲಿನ ಮಳಿಗೆಗಳ ಮಾಲೀಕರು ಮತ್ತು ಸಿಬ್ಬಂದಿ, ಬೆಂಕಿ ಬಿದ್ದಿರುವ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ತಮ್ಮ ಮಳಿಗೆಗಳಿಂದ ಬಟ್ಟೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago