BREAKING NEWS

ನವೀಕರಣ ಕಾಮಗಾರಿಯಿಂದಾಗಿ ಆಸ್ಪತ್ರೆಯಲ್ಲಿ ಬೆಂಕಿ : ರೋಗಿಗಳ ಸ್ಥಳಾಂತರ

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ.

ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.

ಆಸ್ಪತ್ರೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯಿಂದಾಗಿ ನೆಲಮಾಳಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಆಸ್ಪತ್ರೆಯನ್ನು ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ಬೆಳಗಿನ ಜಾವ 4.30ರ ಸುಮಾರಿಗೆ ಕರೆ ಬಂದಿತ್ತು, ಸುಮಾರು ಎರಡು ಡಜನ್ ನಷ್ಟು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾಗಿ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

lokesh

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

2 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago