BREAKING NEWS

ನವೀಕರಣ ಕಾಮಗಾರಿಯಿಂದಾಗಿ ಆಸ್ಪತ್ರೆಯಲ್ಲಿ ಬೆಂಕಿ : ರೋಗಿಗಳ ಸ್ಥಳಾಂತರ

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ.

ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.

ಆಸ್ಪತ್ರೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯಿಂದಾಗಿ ನೆಲಮಾಳಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಆಸ್ಪತ್ರೆಯನ್ನು ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ಬೆಳಗಿನ ಜಾವ 4.30ರ ಸುಮಾರಿಗೆ ಕರೆ ಬಂದಿತ್ತು, ಸುಮಾರು ಎರಡು ಡಜನ್ ನಷ್ಟು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾಗಿ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

lokesh

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago