BREAKING NEWS

ನವೀಕರಣ ಕಾಮಗಾರಿಯಿಂದಾಗಿ ಆಸ್ಪತ್ರೆಯಲ್ಲಿ ಬೆಂಕಿ : ರೋಗಿಗಳ ಸ್ಥಳಾಂತರ

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ.

ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.

ಆಸ್ಪತ್ರೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯಿಂದಾಗಿ ನೆಲಮಾಳಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಆಸ್ಪತ್ರೆಯನ್ನು ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ಬೆಳಗಿನ ಜಾವ 4.30ರ ಸುಮಾರಿಗೆ ಕರೆ ಬಂದಿತ್ತು, ಸುಮಾರು ಎರಡು ಡಜನ್ ನಷ್ಟು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾಗಿ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago