BREAKING NEWS

ಪಟಾಕಿ ಗೋದಾಮಿನಲ್ಲಿ ಬೆಂಕಿ| ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ತಿಳಿಸಿದ್ದಾರೆ.

ಲೈಸೆನ್ಸ್ ಪಡೆದು ಪಟಾಕಿಗಳನ್ನು ಮಾಡಿದ್ದಾರಾ? ಇಲ್ಲವೇ ಹಾಗೇ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ‌ ಕೈಗೊಳ್ಳಲಾಗುವುದು.

20 ಕಾರ್ಮಿಕರಿದ್ದರು: ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.

ಮೃತರಲ್ಲಿ ಏಳು ಜನ ಒಂದೇ ಗ್ರಾಮದವರು: ಅಗ್ನಿ ಅವಘಡದಲ್ಲಿ ಸಜೀವವಾಗಿ ದಹನಗೊಂಡ 14 ಜನರ ಪೈಕಿ ಏಳು ಮಂದಿ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಟಿ ಅಮ್ಮಾಪೇಟೆ ಎಂಬ ಗ್ರಾಮದ ಗಿರಿ, ಆದಿಕೇಶವನ್, ವಿಜಯ್ ರಾಘವನ್, ಇಲಂಬರದಿ, ಆಕಾಶ, ವೇಡಪನ್ ಸಚಿನ್ ಸೇರಿ ಏಳು ಯುವಕರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮೇಲ್ನೋಟಕ್ಕೆ ಗೋದಾಮಿನ ಮಾಲೀಕರ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದ್ದಾರೆ.

andolanait

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

4 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

28 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

44 mins ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

1 hour ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

1 hour ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago