BREAKING NEWS

ಪಟಾಕಿ ಗೋದಾಮಿನಲ್ಲಿ ಬೆಂಕಿ| ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ತಿಳಿಸಿದ್ದಾರೆ.

ಲೈಸೆನ್ಸ್ ಪಡೆದು ಪಟಾಕಿಗಳನ್ನು ಮಾಡಿದ್ದಾರಾ? ಇಲ್ಲವೇ ಹಾಗೇ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ‌ ಕೈಗೊಳ್ಳಲಾಗುವುದು.

20 ಕಾರ್ಮಿಕರಿದ್ದರು: ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.

ಮೃತರಲ್ಲಿ ಏಳು ಜನ ಒಂದೇ ಗ್ರಾಮದವರು: ಅಗ್ನಿ ಅವಘಡದಲ್ಲಿ ಸಜೀವವಾಗಿ ದಹನಗೊಂಡ 14 ಜನರ ಪೈಕಿ ಏಳು ಮಂದಿ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಟಿ ಅಮ್ಮಾಪೇಟೆ ಎಂಬ ಗ್ರಾಮದ ಗಿರಿ, ಆದಿಕೇಶವನ್, ವಿಜಯ್ ರಾಘವನ್, ಇಲಂಬರದಿ, ಆಕಾಶ, ವೇಡಪನ್ ಸಚಿನ್ ಸೇರಿ ಏಳು ಯುವಕರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮೇಲ್ನೋಟಕ್ಕೆ ಗೋದಾಮಿನ ಮಾಲೀಕರ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದ್ದಾರೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

52 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago