ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ ತಂಡ ತಡರಾತ್ರಿ ಜಿಂಕೆ ಬೇಟೆಯಾಡಲು ಬಂದಿದ್ದರು. ಬೇಟೆಗಾರರು ನಾಲ್ಕಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದರು.
ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದು ಗುಂಡೇಟಿಗೆ ಬಲಿಯಾದ ಮನೋಜ್ ಶವವನ್ನ ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಪರೀಕ್ಷೆಗೆ ಸಾಗಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಬಂಡೀಪುರ ಹುಲಿಯೋಜನೆ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್, ಎಸಿಎಫ್ ರವೀಂದ್ರ, ಚಾಮರಾಜನಗರ ಎಸ್ಪಿ ಪದ್ಮಿನಿಸಾಹು, ಗುಂಡ್ಲುಪೇಟೆ ಇನ್ಸ್ಪೆಕ್ಟರ್ ಪರಶಿವಮೂರ್ತಿ, ಎಸ್ಐ ಸಾಹೇಬಗೌಡ ಮತ್ತಿತರರು ಭೇಟಿ ನೀಡಿದ್ದರು . ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…