BREAKING NEWS

ಜಿಂಕೆ ಬೇಟೆಯಾಡುವ ವೇಳೆ ಅರಣ್ಯಾಧಿಕಾರಿಗಳಿಂದ ಫೈರಿಂಗ್ : ಬೇಟೆಗಾರ ಸಾವು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ ತಂಡ ತಡರಾತ್ರಿ ಜಿಂಕೆ ಬೇಟೆಯಾಡಲು ಬಂದಿದ್ದರು. ಬೇಟೆಗಾರರು ನಾಲ್ಕಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದರು.

ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದು ಗುಂಡೇಟಿಗೆ ಬಲಿಯಾದ ಮನೋಜ್ ಶವವನ್ನ ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಪರೀಕ್ಷೆಗೆ ಸಾಗಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಬಂಡೀಪುರ ಹುಲಿಯೋಜನೆ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌, ಎಸಿಎಫ್‌ ರವೀಂದ್ರ, ಚಾಮರಾಜನಗರ ಎಸ್ಪಿ ಪದ್ಮಿನಿಸಾಹು, ಗುಂಡ್ಲುಪೇಟೆ ಇನ್ಸ್‌ಪೆಕ್ಟರ್‌ ಪರಶಿವಮೂರ್ತಿ, ಎಸ್‌ಐ ಸಾಹೇಬಗೌಡ ಮತ್ತಿತರರು ಭೇಟಿ ನೀಡಿದ್ದರು . ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

5 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

5 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

8 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

8 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 hours ago