BREAKING NEWS

ಪಂಜಾಬ್‌ನ ಸೇನಾ ಘಟಕದಲ್ಲಿ ಗುಂಡಿನ ದಾಳಿ : 4 ಯೋಧರ ಸಾವು

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ ನೀಡಿದೆ.

ಇದು ಭಯೋತ್ಪಾದನಾ ದಾಳಿ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈವರೆಗೂ ಸೇನಾ ಘಟಕದ ಒಳಗೆ ಪ್ರವೇಶಿಸಲು ಸೇನೆಯು ಪೊಲೀಸರಿಗೆ ಅವಕಾಶ ನೀಡಿಲ್ಲ. ಮೃತರಾದ ಎಲ್ಲ ನಾಲ್ಕೂ ಮಂದಿ 80 ಮೀಡಿಯಂ ರೆಜಿಮೆಂಟ್‌ಗೆ ಸೇರಿದವರಾಗಿದ್ದಾರೆ. ದಾಳಿಕೋರ ಸಾಮಾನ್ಯ ವಸ್ತ್ರದಲ್ಲಿದ್ದ ಎಂದು ಹೇಳಲಾಗಿದೆ.

“ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಬೆಳಗಿನ ಜಾವ 4.35ರ ಸುಮಾರಿಗೆ ಗುಂಡಿನ ದಾಳಿ ಘಟನೆ ವರದಿಯಾಗಿದೆ. ವಿಭಾಗದ ತುರ್ತು ಪ್ರತಿಕ್ರಿಯಾ ತಂಡಗಳು ಕೂಡಲೇ ಸಕ್ರಿಯವಾಗಿವೆ. ಈ ಪ್ರದೇಶವನ್ನು ಜನ ಓಡಾಟದಿಂದ ನಿರ್ಬಂಧಿಸಲಾಗಿದೆ ಹಾಗೂ ಸೀಲ್ ಮಾಡಲಾಗಿದೆ. ಹುಡುಕಾಟ ಕಾರ್ಯಾಚರಣೆಗಳು ನಡೆಯುತ್ತಿವೆ. ನಾಲ್ಕು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ” ಎಂದು ಸೇನಾ ಹೇಳಿಕೆ ತಿಳಿಸಿದೆ.

ಪೊಲೀಸ್ ತಂಡವೊಂದು ಸೇನಾ ಘಟಕದ ಹೊರಗೆ ಕಾಯುತ್ತಿದೆ. ಅವರು ಒಳಗೆ ಪ್ರವೇಶಿಸಲು ಸೇನೆಯು ಇನ್ನೂ ತನ್ನ ಅನುಮತಿ ನೀಡಿಲ್ಲ. ಆದರೆ ಇದು ಭಯೋತ್ಪಾದನಾ ದಾಳಿಯಂತೆ ಕಾಣಿಸುತ್ತಿಲ್ಲ. ಇದು ‘ಆಂತರಿಕ ವಿಚಾರ’ ಇರಬಹುದು ಎಂದು ಬತಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಿಎಸ್ ಖುರಾನಾ ತಿಳಿಸಿದ್ದಾರೆ.

“ಇದರಲ್ಲಿ ಉಗ್ರರ ಅಥವಾ ಆತ್ಮಾಹುತಿ ದಾಳಿಯ ಆಯಾಮ ಕಾಣಿಸುತ್ತಿಲ್ಲ. ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಎಡಿಜಿ ಸುರಿಂದರ್ ಪಾಲ್ ಸಿಂಗ್ ಪಾರ್ಮರ್ ಮಾಹಿತಿ ನೀಡಿದ್ದಾರೆ.
ಬತಿಂಡಾ ಮಿಲಿಟರಿ ಸ್ಟೇಷನ್‌ನ ಆರ್ಟಿಲರಿ ಘಟಕದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇಲ್ಲಿ ಯೋಧರ ಕುಟುಂಬಗಳು ವಾಸಿಸುತ್ತಿವೆ. ಮಿಲಿಟರಿ ಸ್ಟೇಷನ್‌ನಲ್ಲಿನ ಅಧಿಕಾರಿಗಳ ಮೆಸ್‌ನ ಒಳಭಾಗದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ. ಕಂಟೋನ್ಮೆಂಟ್‌ನ ಎಲ್ಲ ನಾಲ್ಕು ದ್ವಾರಗಳನ್ನು ಮುಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟಕದ ಗಾರ್ಡ್ ರೂಂನಿಂದ 28 ಕಾರ್ಟ್ರಿಡ್ಜ್‌ಗಳಿದ್ದ ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿತ್ತು. ಕೆಲವು ಸೇನಾ ಸಿಬ್ಬಂದಿ ಈ ದಾಳಿ ಹಿಂದೆ ಇರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

lokesh

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

1 hour ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

4 hours ago