BREAKING NEWS

ಪಂಜಾಬ್‌ನ ಸೇನಾ ಘಟಕದಲ್ಲಿ ಗುಂಡಿನ ದಾಳಿ : 4 ಯೋಧರ ಸಾವು

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ ನೀಡಿದೆ.

ಇದು ಭಯೋತ್ಪಾದನಾ ದಾಳಿ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈವರೆಗೂ ಸೇನಾ ಘಟಕದ ಒಳಗೆ ಪ್ರವೇಶಿಸಲು ಸೇನೆಯು ಪೊಲೀಸರಿಗೆ ಅವಕಾಶ ನೀಡಿಲ್ಲ. ಮೃತರಾದ ಎಲ್ಲ ನಾಲ್ಕೂ ಮಂದಿ 80 ಮೀಡಿಯಂ ರೆಜಿಮೆಂಟ್‌ಗೆ ಸೇರಿದವರಾಗಿದ್ದಾರೆ. ದಾಳಿಕೋರ ಸಾಮಾನ್ಯ ವಸ್ತ್ರದಲ್ಲಿದ್ದ ಎಂದು ಹೇಳಲಾಗಿದೆ.

“ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಬೆಳಗಿನ ಜಾವ 4.35ರ ಸುಮಾರಿಗೆ ಗುಂಡಿನ ದಾಳಿ ಘಟನೆ ವರದಿಯಾಗಿದೆ. ವಿಭಾಗದ ತುರ್ತು ಪ್ರತಿಕ್ರಿಯಾ ತಂಡಗಳು ಕೂಡಲೇ ಸಕ್ರಿಯವಾಗಿವೆ. ಈ ಪ್ರದೇಶವನ್ನು ಜನ ಓಡಾಟದಿಂದ ನಿರ್ಬಂಧಿಸಲಾಗಿದೆ ಹಾಗೂ ಸೀಲ್ ಮಾಡಲಾಗಿದೆ. ಹುಡುಕಾಟ ಕಾರ್ಯಾಚರಣೆಗಳು ನಡೆಯುತ್ತಿವೆ. ನಾಲ್ಕು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ” ಎಂದು ಸೇನಾ ಹೇಳಿಕೆ ತಿಳಿಸಿದೆ.

ಪೊಲೀಸ್ ತಂಡವೊಂದು ಸೇನಾ ಘಟಕದ ಹೊರಗೆ ಕಾಯುತ್ತಿದೆ. ಅವರು ಒಳಗೆ ಪ್ರವೇಶಿಸಲು ಸೇನೆಯು ಇನ್ನೂ ತನ್ನ ಅನುಮತಿ ನೀಡಿಲ್ಲ. ಆದರೆ ಇದು ಭಯೋತ್ಪಾದನಾ ದಾಳಿಯಂತೆ ಕಾಣಿಸುತ್ತಿಲ್ಲ. ಇದು ‘ಆಂತರಿಕ ವಿಚಾರ’ ಇರಬಹುದು ಎಂದು ಬತಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಿಎಸ್ ಖುರಾನಾ ತಿಳಿಸಿದ್ದಾರೆ.

“ಇದರಲ್ಲಿ ಉಗ್ರರ ಅಥವಾ ಆತ್ಮಾಹುತಿ ದಾಳಿಯ ಆಯಾಮ ಕಾಣಿಸುತ್ತಿಲ್ಲ. ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಎಡಿಜಿ ಸುರಿಂದರ್ ಪಾಲ್ ಸಿಂಗ್ ಪಾರ್ಮರ್ ಮಾಹಿತಿ ನೀಡಿದ್ದಾರೆ.
ಬತಿಂಡಾ ಮಿಲಿಟರಿ ಸ್ಟೇಷನ್‌ನ ಆರ್ಟಿಲರಿ ಘಟಕದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇಲ್ಲಿ ಯೋಧರ ಕುಟುಂಬಗಳು ವಾಸಿಸುತ್ತಿವೆ. ಮಿಲಿಟರಿ ಸ್ಟೇಷನ್‌ನಲ್ಲಿನ ಅಧಿಕಾರಿಗಳ ಮೆಸ್‌ನ ಒಳಭಾಗದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ. ಕಂಟೋನ್ಮೆಂಟ್‌ನ ಎಲ್ಲ ನಾಲ್ಕು ದ್ವಾರಗಳನ್ನು ಮುಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟಕದ ಗಾರ್ಡ್ ರೂಂನಿಂದ 28 ಕಾರ್ಟ್ರಿಡ್ಜ್‌ಗಳಿದ್ದ ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿತ್ತು. ಕೆಲವು ಸೇನಾ ಸಿಬ್ಬಂದಿ ಈ ದಾಳಿ ಹಿಂದೆ ಇರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

lokesh

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago