BREAKING NEWS

ಪಂಜಾಬ್‌ನ ಸೇನಾ ಘಟಕದಲ್ಲಿ ಗುಂಡಿನ ದಾಳಿ : 4 ಯೋಧರ ಸಾವು

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ ನೀಡಿದೆ.

ಇದು ಭಯೋತ್ಪಾದನಾ ದಾಳಿ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈವರೆಗೂ ಸೇನಾ ಘಟಕದ ಒಳಗೆ ಪ್ರವೇಶಿಸಲು ಸೇನೆಯು ಪೊಲೀಸರಿಗೆ ಅವಕಾಶ ನೀಡಿಲ್ಲ. ಮೃತರಾದ ಎಲ್ಲ ನಾಲ್ಕೂ ಮಂದಿ 80 ಮೀಡಿಯಂ ರೆಜಿಮೆಂಟ್‌ಗೆ ಸೇರಿದವರಾಗಿದ್ದಾರೆ. ದಾಳಿಕೋರ ಸಾಮಾನ್ಯ ವಸ್ತ್ರದಲ್ಲಿದ್ದ ಎಂದು ಹೇಳಲಾಗಿದೆ.

“ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಬೆಳಗಿನ ಜಾವ 4.35ರ ಸುಮಾರಿಗೆ ಗುಂಡಿನ ದಾಳಿ ಘಟನೆ ವರದಿಯಾಗಿದೆ. ವಿಭಾಗದ ತುರ್ತು ಪ್ರತಿಕ್ರಿಯಾ ತಂಡಗಳು ಕೂಡಲೇ ಸಕ್ರಿಯವಾಗಿವೆ. ಈ ಪ್ರದೇಶವನ್ನು ಜನ ಓಡಾಟದಿಂದ ನಿರ್ಬಂಧಿಸಲಾಗಿದೆ ಹಾಗೂ ಸೀಲ್ ಮಾಡಲಾಗಿದೆ. ಹುಡುಕಾಟ ಕಾರ್ಯಾಚರಣೆಗಳು ನಡೆಯುತ್ತಿವೆ. ನಾಲ್ಕು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ” ಎಂದು ಸೇನಾ ಹೇಳಿಕೆ ತಿಳಿಸಿದೆ.

ಪೊಲೀಸ್ ತಂಡವೊಂದು ಸೇನಾ ಘಟಕದ ಹೊರಗೆ ಕಾಯುತ್ತಿದೆ. ಅವರು ಒಳಗೆ ಪ್ರವೇಶಿಸಲು ಸೇನೆಯು ಇನ್ನೂ ತನ್ನ ಅನುಮತಿ ನೀಡಿಲ್ಲ. ಆದರೆ ಇದು ಭಯೋತ್ಪಾದನಾ ದಾಳಿಯಂತೆ ಕಾಣಿಸುತ್ತಿಲ್ಲ. ಇದು ‘ಆಂತರಿಕ ವಿಚಾರ’ ಇರಬಹುದು ಎಂದು ಬತಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಿಎಸ್ ಖುರಾನಾ ತಿಳಿಸಿದ್ದಾರೆ.

“ಇದರಲ್ಲಿ ಉಗ್ರರ ಅಥವಾ ಆತ್ಮಾಹುತಿ ದಾಳಿಯ ಆಯಾಮ ಕಾಣಿಸುತ್ತಿಲ್ಲ. ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಎಡಿಜಿ ಸುರಿಂದರ್ ಪಾಲ್ ಸಿಂಗ್ ಪಾರ್ಮರ್ ಮಾಹಿತಿ ನೀಡಿದ್ದಾರೆ.
ಬತಿಂಡಾ ಮಿಲಿಟರಿ ಸ್ಟೇಷನ್‌ನ ಆರ್ಟಿಲರಿ ಘಟಕದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇಲ್ಲಿ ಯೋಧರ ಕುಟುಂಬಗಳು ವಾಸಿಸುತ್ತಿವೆ. ಮಿಲಿಟರಿ ಸ್ಟೇಷನ್‌ನಲ್ಲಿನ ಅಧಿಕಾರಿಗಳ ಮೆಸ್‌ನ ಒಳಭಾಗದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ. ಕಂಟೋನ್ಮೆಂಟ್‌ನ ಎಲ್ಲ ನಾಲ್ಕು ದ್ವಾರಗಳನ್ನು ಮುಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟಕದ ಗಾರ್ಡ್ ರೂಂನಿಂದ 28 ಕಾರ್ಟ್ರಿಡ್ಜ್‌ಗಳಿದ್ದ ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿತ್ತು. ಕೆಲವು ಸೇನಾ ಸಿಬ್ಬಂದಿ ಈ ದಾಳಿ ಹಿಂದೆ ಇರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago