BREAKING NEWS

ಪಂಜಾಬ್‌ನ ಸೇನಾ ಘಟಕದಲ್ಲಿ ಗುಂಡಿನ ದಾಳಿ : 4 ಯೋಧರ ಸಾವು

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ ನೀಡಿದೆ.

ಇದು ಭಯೋತ್ಪಾದನಾ ದಾಳಿ ಅಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈವರೆಗೂ ಸೇನಾ ಘಟಕದ ಒಳಗೆ ಪ್ರವೇಶಿಸಲು ಸೇನೆಯು ಪೊಲೀಸರಿಗೆ ಅವಕಾಶ ನೀಡಿಲ್ಲ. ಮೃತರಾದ ಎಲ್ಲ ನಾಲ್ಕೂ ಮಂದಿ 80 ಮೀಡಿಯಂ ರೆಜಿಮೆಂಟ್‌ಗೆ ಸೇರಿದವರಾಗಿದ್ದಾರೆ. ದಾಳಿಕೋರ ಸಾಮಾನ್ಯ ವಸ್ತ್ರದಲ್ಲಿದ್ದ ಎಂದು ಹೇಳಲಾಗಿದೆ.

“ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಬೆಳಗಿನ ಜಾವ 4.35ರ ಸುಮಾರಿಗೆ ಗುಂಡಿನ ದಾಳಿ ಘಟನೆ ವರದಿಯಾಗಿದೆ. ವಿಭಾಗದ ತುರ್ತು ಪ್ರತಿಕ್ರಿಯಾ ತಂಡಗಳು ಕೂಡಲೇ ಸಕ್ರಿಯವಾಗಿವೆ. ಈ ಪ್ರದೇಶವನ್ನು ಜನ ಓಡಾಟದಿಂದ ನಿರ್ಬಂಧಿಸಲಾಗಿದೆ ಹಾಗೂ ಸೀಲ್ ಮಾಡಲಾಗಿದೆ. ಹುಡುಕಾಟ ಕಾರ್ಯಾಚರಣೆಗಳು ನಡೆಯುತ್ತಿವೆ. ನಾಲ್ಕು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ” ಎಂದು ಸೇನಾ ಹೇಳಿಕೆ ತಿಳಿಸಿದೆ.

ಪೊಲೀಸ್ ತಂಡವೊಂದು ಸೇನಾ ಘಟಕದ ಹೊರಗೆ ಕಾಯುತ್ತಿದೆ. ಅವರು ಒಳಗೆ ಪ್ರವೇಶಿಸಲು ಸೇನೆಯು ಇನ್ನೂ ತನ್ನ ಅನುಮತಿ ನೀಡಿಲ್ಲ. ಆದರೆ ಇದು ಭಯೋತ್ಪಾದನಾ ದಾಳಿಯಂತೆ ಕಾಣಿಸುತ್ತಿಲ್ಲ. ಇದು ‘ಆಂತರಿಕ ವಿಚಾರ’ ಇರಬಹುದು ಎಂದು ಬತಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಿಎಸ್ ಖುರಾನಾ ತಿಳಿಸಿದ್ದಾರೆ.

“ಇದರಲ್ಲಿ ಉಗ್ರರ ಅಥವಾ ಆತ್ಮಾಹುತಿ ದಾಳಿಯ ಆಯಾಮ ಕಾಣಿಸುತ್ತಿಲ್ಲ. ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಎಡಿಜಿ ಸುರಿಂದರ್ ಪಾಲ್ ಸಿಂಗ್ ಪಾರ್ಮರ್ ಮಾಹಿತಿ ನೀಡಿದ್ದಾರೆ.
ಬತಿಂಡಾ ಮಿಲಿಟರಿ ಸ್ಟೇಷನ್‌ನ ಆರ್ಟಿಲರಿ ಘಟಕದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇಲ್ಲಿ ಯೋಧರ ಕುಟುಂಬಗಳು ವಾಸಿಸುತ್ತಿವೆ. ಮಿಲಿಟರಿ ಸ್ಟೇಷನ್‌ನಲ್ಲಿನ ಅಧಿಕಾರಿಗಳ ಮೆಸ್‌ನ ಒಳಭಾಗದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ. ಕಂಟೋನ್ಮೆಂಟ್‌ನ ಎಲ್ಲ ನಾಲ್ಕು ದ್ವಾರಗಳನ್ನು ಮುಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟಕದ ಗಾರ್ಡ್ ರೂಂನಿಂದ 28 ಕಾರ್ಟ್ರಿಡ್ಜ್‌ಗಳಿದ್ದ ಐಎನ್‌ಎಸ್‌ಎಎಸ್ ಅಸಾಲ್ಟ್ ರೈಫಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿತ್ತು. ಕೆಲವು ಸೇನಾ ಸಿಬ್ಬಂದಿ ಈ ದಾಳಿ ಹಿಂದೆ ಇರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

lokesh

Recent Posts

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

38 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

54 mins ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

3 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

20 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

23 hours ago