BREAKING NEWS

ತಾಂಜಾನಿಯಾದಲ್ಲಿ ನಿರ್ಮಾಣವಾಗಲಿದೆ ಭಾರತದ ಹೊರಗಿನ ಮೊದಲ ಐಐಟಿ: ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್‌ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ.

ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಜಂಜಿಬಾರ್ ಅಧ್ಯಕ್ಷ ಹುಸೇನ್ ಅಲಿ ಮ್ವಿನಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಜೈಂಶಕರ್ ಅವರು ಪ್ರಸ್ತುತ ತಾಂಜಾನಿಯಾ ಪ್ರವಾಸದಲ್ಲಿದ್ದಾರೆ.

“ಭಾರತದ ಹೊರಗೆ ಸ್ಥಾಪಿಸಲಾದ ಮೊದಲ ಐಐಟಿ ಕ್ಯಾಂಪಸ್ ಜಾಂಜಿಬಾರ್‌ನಲ್ಲಿರಲಿದೆ” ಎಂದು ಸಚಿವಾಲಯ ಹೇಳಿದೆ.

ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್‌ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅದು ಹೇಳಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

“ಈ ಕ್ಯಾಂಪಸ್ ಭಾರತ ಮತ್ತು ತಾಂಜಾನಿಯಾ ನಡುವಿನ ದೀರ್ಘಕಾಲದ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಶೈಕ್ಷಣಿಕ ಪಾಲುದಾರಿಕೆಯ ಸಂಬಂಧವನ್ನು ಔಪಚಾರಿಕಗೊಳಿಸಲಾಗಿದೆ.  ಐಐಟಿ 2023ರ ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದೆ.

andolanait

Recent Posts

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…

48 mins ago

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

2 hours ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

3 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

7 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

7 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

7 hours ago